rtgh
Headlines

ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್! 25.5% ವೇತನ ಹೆಚ್ಚಳ ಬಹುತೇಕ ಫಿಕ್ಸ್

7th Pay Commission update
Share

ಹಲೋ ಸ್ನೇಹಿತರೇ, ಲೋಕಸಭಾ ಚುನಾವಣಾ ಮುಗಿಯುತ್ತಿದ್ದಂತೆ, ನೀತಿ ಸಂಹಿತೆ ಸಡಿಲವಾಗುತ್ತಿದ್ದಂತೆ ರಾಜ್ಯದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಶುಭ ಸುದ್ದಿ ಬಂದಿದೆ. ಏಕೆಂದರೆ ಸಿಎಂ ಸಿದ್ಧರಾಮಯ್ಯ 7ನೇ ವೇತನ ಆಯೋಗ ಜಾರಿಗೆ ಒಲವು ತೋರಿದ್ದು, ಸದ್ಯದಲ್ಲೇ ಸರ್ಕಾರಿ ನೌಕರರ ಹಲವು ವರ್ಷಗಳ ಬೇಡಿಕೆ ಈಡೇರುವುದು ಬಹುತೇಕ ಫಿಕ್ಸ್ ಎನ್ನಲಾಗಿದೆ.

7th Pay Commission update

ಲೋಕಸಭಾ ಚುನಾವಣೆ ಆರಂಭವಾಗುವ ಸಮಯದಲ್ಲಿ ಸಲ್ಲಿಕೆಯಾಗಿದ್ದ 7ನೇ ವೇತನ ಆಯೋಗದ ಶಿಫಾರಸುಗಳನ್ನು ಸ್ವೀಕರಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೂಲಂಕಶವಾಗಿ ಅಧ್ಯಯನ ಮಾಡಿ ಸಲಹೆ ನೀಡಲು ಹಣಕಾಸು ಇಲಾಖೆಗೆ ಸೂಚಿಸಿದ್ದರು. ಆ ಬಳಿಕ ನೀತಿ ಸಂಹಿತೆ ಜಾರಿಯಾಯಿತು. ಆದರೀಗ ನೀತಿ ಸಂಹಿತೆ ಸಡಿಲವಾಗುತ್ತಿದ್ದು, ಸರ್ಕಾರಿ ನೌಕರರ ತವಕ ಹೆಚ್ಚಾಗಿದೆ.

7 ನೇ ವೇತನ ಆಯೋಗ ಜಾರಿಯಿಂದ ಎಷ್ಟು ಹೆಚ್ಚಾಗುತ್ತೆ ಸಂಬಳ?

7ನೇ ವೇತನ ಆಯೋಗವು ರಾಜ್ಯ ಸರ್ಕಾರಿ ನೌಕರರ ಮೂಲ ವೇತನದಲ್ಲಿ 27.5% ಹೆಚ್ಚಳ ಮಾಡುವುದರ ಜೊತೆಗೆ ಅವರ ಕನಿಷ್ಠ ವೇತನವನ್ನು ತಿಂಗಳಿಗೆ 17,000 ರೂ.ನಿಂದ 27,000 ರೂ.ಗೆ ಹೆಚ್ಚಿಸುವಂತೆ ಆಯೋಗವು ಶಿಫಾರಸು ಮಾಡಿದೆ. ಒಟ್ಟಿನಲ್ಲಿ ಪ್ರಸ್ತುತ 1:8.86 ಕನಿಷ್ಠ ಮತ್ತು ಗರಿಷ್ಠ ವೇತನಗಳ ಅನುಪಾತವನ್ನು 1:8.93ಕ್ಕೆ ಹೆಚ್ಚಿಸಲಾಗಿದೆ. ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳ ಬೋಧಕೇತರ ನೌಕರರಿಗೂ ಈ ಶಿಫಾರಸು ಅನ್ವಯವಾಗಲಿದ್ದು, 2022ರ ಜೂನ್‌ನಿಂದ ಪೂರ್ವಾನ್ವಯವಾಗುವಂತೆ ಜಾರಿ ಮಾಡುವಂತೆ ಶಿಫಾರಸು ಮಾಡಿದೆ. ಇದರ ಬೆನ್ನಲ್ಲೇ ಸರ್ಕಾರವು ಮೂಲ ವೇತನದಲ್ಲಿ 27.5% ಹೆಚ್ಚಳ ಘೋಷಿಸಿದೆ.

ಇದನ್ನೂ ಸಹ ಓದಿ : ಮಳೆ ಬಿದ್ದಿದ್ದೇ ತಡ ತರಕಾರಿ ರೇಟ್‌ ಮುಗಿಲು ಮುಟ್ಟಿದೆ! ಕೆಜಿಗೆ 320 ರೂ. ಗಡಿ ದಾಟಿದೆ

ಅಂದಹಾಗೆ ಈಗಾಗಲೇ ಮಧ್ಯಂತರವಾಗಿ ಶೇ.17ರಷ್ಟು ಮೂಲ ವೇತನ ಹೆಚ್ಚಳ ಮಾಡಿದ್ದು, ಅಂತಿಮವಾಗಿ ಇನ್ನೂ ಶೇ.8 ರಿಂದ ಶೇ.8.5 ರಷ್ಟು ವೇತನ ಹೆಚ್ಚಳ ನಿರೀಕ್ಷಿಸಲಾಗಿದೆ. ಒಟ್ಟಾರೆ ಏರಿಕೆ ಮೂಲವೇತನದ ಶೇ.25 ರಿಂದ ಶೇ.25.5 ತಲುಪುವ ಸಾಧ್ಯತೆಯಿದೆ ಎಂದು ಬಲ್ಲ ಮೂಲಗಳು ಖಚಿತಪಡಿಸಿವೆ.

ಇದರ ಜೊತೆಗೆ ಬೇಸಿಕ್ ಸ್ಯಾಲರಿ 17,000 ರೂ.ನಿಂದ 27,000 ರೂಪಾಯಿಗೆ ಏರಿಕೆಯಾಗಲಿದೆ. ಹಳೇಯ ಬೇಸಿಕ್ ಸ್ಯಾಲರಿ 20900 ಆದರೆ ಹೊಸ ವರದಿ ಪ್ರಕಾರ 33300 ಕ್ಕೆ ಏರಿಕೆಯಾಗಲಿದೆ. 40,900 ಇದ್ದರೆ ಅದು 65,950 ಕ್ಕೆ ಏರಿಕೆಯಾಗುತ್ತದೆ. ಬೇಸಿಕ್ 50,150 ಇದ್ದರೆ ವೇತನ ಆಯೋಗದ ವರದಿ ಪ್ರಕಾರ ಅದು 79,900 ಬೇಸಿಕ್‌ಗೆ ಬರಲಿದೆ. ಇದರ ಜೊತೆಗೆ ಡಿಎ, ಐಆರ್ ಎಲ್ಲವೂ ಸೇರಿಕೊಂಡು ಸಂಬಳ ಮತ್ತಷ್ಟು ಹೆಚ್ಚಾಗಲಿದೆ. ಹಿರಿಯ ಶ್ರೇಣಿ ನೌಕರರ ಆರಂಭಿಕ ಕನಿಷ್ಠ ವೇತನ ಈಗ 1,04,600 ರೂಪಾಯಿಯಿದ್ದು, ಅದನ್ನು 1,67,200 ರೂಪಾಯಿಗೆ ಪರಿಷ್ಕರಿಸುವಂತೆ ಶಿಫಾರಸು ಮಾಡಲಾಗಿದೆ.

ಸದ್ಯಕ್ಕೆ ದೊರೆತ ಸಿಹಿ ಸುದ್ದಿ ಏನಂದ್ರೆ ಜೂನ್ ಮೊದಲ ವಾರ ನೀತಿ ಸಂಹಿತೆ ಮುಕ್ತಾಯವಾದ ಬಳಿಕ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ಅಂತಿಮ ನಿರ್ಣಯ ಪ್ರಕಟಿಸಲಾಗುತ್ತದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.

ಇತರೆ ವಿಷಯಗಳು:

ರೈತರಿಗೆ ಗುಡ್ ನ್ಯೂಸ್! ಪ್ರತಿ ತಿಂಗಳು 36000 ನೀಡಲು ಸರ್ಕಾರ ಹೊಸ ಯೋಜನೆ ರೂಪಿಸಿದೆ

ಈ ಯೋಜನೆಯಡಿ ತಿಂಗಳಿಗೆ 1 ಲಕ್ಷ ರೂಪಾಯಿ ಪಿಂಚಣಿ! ಇಲ್ಲಿದೆ ಸಂಪೂರ್ಣ ವಿವರ

ಇಂದಿನಿಂದ ಸತತ 3 ದಿನ ಬ್ಯಾಂಕ್‌ ರಜೆ!


Share

Leave a Reply

Your email address will not be published. Required fields are marked *