ಹಲೋ ಸ್ನೇಹಿತರೇ, ಅನ್ನಭಾಗ್ಯ ಯೋಜನೆಯ ಅಕ್ಕಿ ಬದಲಾಗಿ ಹಣ ಹಾಕಲಾಗುತ್ತಿದ್ದು, ನಿಮ್ಮ ಖಾತೆಗೆ ಹಣ ಬಂದಿದೆಯೇ? ಎಷ್ಟು ಹಣ ಜಮೆಯಾಗಿದೆ? ಯಾರ ಖಾತೆಗೆ ಜಮೆಯಾಗಿದೆ? ಎಂಬ ಇತ್ಯಾದಿ ಮಾಹಿತಿ ತಿಳಿಸಿಕೊಡುವ ನಿಟ್ಟಿನಲ್ಲಿ ಆಹಾರ ಇಲಾಖೆಯು ವೆಬ್ಸೈಟ್ ಲಿಂಕ್ ಬಿಡುಗಡೆ ಮಾಡಿದೆ. ಅಕ್ಕಿ ದಾಸ್ತಾನು ಕೊರತೆಯಿಂದ ಅನ್ನಭಾಗ್ಯ ಅಕ್ಕಿಯ ಬದಲು ಹಣ ಜಮೆ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿತ್ತು. ನಿಮ್ಮ ಮೊಬೈಲ್ ಫೋನ್ನಲ್ಲಿ ರೇಷನ್ ಕಾರ್ಡ್ ಸ್ಟೇಟಸ್ ಅನ್ನು ನೀವು ಸುಲಭವಾಗಿ ಪರಿಶೀಲಿಸಬಹುದು
![anna bhagya amount check](https://i0.wp.com/udyaga.com/wp-content/uploads/2024/05/anna-bhagya-amount-check.jpg?resize=640%2C360&ssl=1)
ರಾಜ್ಯ ಸರ್ಕಾರವು ಅನ್ನ ಭಾಗ್ಯ ಯೋಜನೆಯಡಿ ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ ಬಿಪಿಎಲ್ ಕಾರ್ಡುದಾರರಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯ ಹಣವನ್ನು ಖಾತೆಗೆ ಜಮೆ ಮಾಡುತ್ತಿದೆ. ಈ ಹಣವನ್ನು ಫಲಾನುಭವಿಯ ಆಧಾರ್ ಸಂಖ್ಯೆಗೆ ಲಿಂಕ್ ಮಾಡಿದ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ. ನಿಮ್ಮ ರೇಷನ್ ಕಾರ್ಡ್ ಹಣ ಖಾತೆಗೆ ಜಮೆ ಆಗಿದೆಯೇ ಎಂಬುದನ್ನು ಆನ್ಲೈನಲ್ಲೇ ಪರಿಶೀಲಿಸಬಹುದು.
ಮೇ ತಿಂಗಳ ಅನ್ನಭಾಗ್ಯ ಯೋಜನೆಯ ಹಣ ಯಾರ್ಯಾರಿಗೆ ಬಂದಿಲ್ಲವೋ ಅವರು ಕೆಳಗೆ ನೀಡಿರುವಂತಹ ಸಮಸ್ಯೆಗಳಿಗೆ ಪರಿಹಾರಗಳನ್ನು ಹುಡುಕಿಕೊಂಡು ಮತ್ತು ಬಗೆಹರಿಸಿಕೊಂಡು ಅನ್ನಭಾಗ್ಯ ಯೋಜನೆಯ ಅಕ್ಕಿ ಹಣವನ್ನು ಪಡೆದುಕೊಳ್ಳಬಹುದಾಗಿದೆ.
Contents
ಅನ್ನಭಾಗ್ಯ ಯೋಜನೆಯ ಬಾರದಿರಲು ಕಾರಣಗಳು:
- ಕುಟುಂಬದ ಮುಖ್ಯಸ್ಥೆಯ ಆಧಾರ್ ಕಾರ್ಡ್ ಅಪ್ಡೇಟ್ ಆಗದೇ ಇರುವುದು
- ಪಡಿತರ ಚೀಟಿಯ ಇ-ಕೆವೈಸಿ ಆಗದೆ ಇರುವುದು
- ಕುಟುಂಬದ ಮುಖ್ಯಸ್ಥೆಯ ಬ್ಯಾಂಕ್ ಖಾತೆಯ ಇ-ಕೆವೈಸಿ ಆಗದೆ ಇರುವುದು
- ಪಡಿತರ ಚೀಟಿ ಅಪ್ಡೇಟ್ ಆಗದಿರುವುದು
- ಇದರ ಜೊತೆಗೆ ತಾಂತ್ರಿಕ ದೋಷವು ಕೂಡ ಒಂದಾಗಿದೆ
ಈ ಮೇಲಿನ ಎಲ್ಲ ಸಮಸ್ಯೆಗಳನ್ನು ನೀವು ಪರಿಹರಿಸಿಕೊಂಡರೆ ನಿಮಗೆ ಅನ್ನ ಭಾಗ್ಯ ಯೋಜನೆಯ ಅಕ್ಕಿ ಹಣ ಸಿಗುವುದು ಸುಲಭ.
ಇದನ್ನೂ ಸಹ ಓದಿ : ಇನ್ಮುಂದೆ ಉಚಿತ ಕರೆಂಟ್ ಬಿಲ್ನಿಂದ ಆಧಾರ್ ಡೀಲಿಂಕ್ ಮಾಡುವುದು ಇನ್ನೂ ಸುಲಭ!
ಅನ್ನಭಾಗ್ಯ ಯೋಜನೆಯ ಸ್ಟೇಟಸ್ ಚೆಕ್ ಮಾಡುವುದು ಹೇಗೆ?
- ಕರ್ನಾಟಕ ಸರ್ಕಾರದ ವೆಬ್ಸೈಟ್ https://www.karnataka.gov.in/ ಗೆ ಭೇಟಿ ನೀಡಿ
- E-services ಟ್ಯಾಬ್ ಮೇಲೆ ಕ್ಲಿಕ್ ಮಾಡಿ
- DBT status ಲಿಂಕ್ ಅನ್ನು ಕ್ಲಿಕ್ ಮಾಡಿಕೊಳ್ಳಿ
- ನಿಮ್ಮ ರೇಷನ್ ಕಾರ್ಡ್ನಲ್ಲಿ ಯಾವ ಸಮಯದ ಸ್ಟೇಟಸ್ ಚೆಕ್ ಮಾಡಲು ಬಯಸುತ್ತೀರಿ ಎಂಬುದನ್ನು ಆಯ್ಕೆಮಾಡಿ
- ನಿಮ್ಮ ರೇಷನ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ ನಂತರ Continue ಬಟನ್ ಕ್ಲಿಕ್ ಮಾಡಿ.
- ಅನ್ನಭಾಗ್ಯ ಯೋಜನೆಯಡಿ ನಿಮ್ಮ ಸ್ಟೇಟಸ್ ಹೇಗಿದೆ ಎಂದು ಸ್ಕ್ರೀನ್ನಲ್ಲಿ ತೋರಿಸಲಾಗುತ್ತದೆ.
- ನೀವು ಯಾವುದೇ ಪ್ರಶ್ನೆಗಳನ್ನು ಹೊಂದಿದ್ದರೆ, ನೀವು ಕರ್ನಾಟಕ ಸರ್ಕಾರದ ಸಹಾಯವಾಣಿ 1800-425-5889 ಅನ್ನು ಸಂಪರ್ಕಿಸಬಹುದು.
ಆನ್ಲೈನ್ನಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಹೇಗೆ?
- https://ahara.kar.nic.in/ಗೆ ಲಾಗ್ ಇನ್ ಆಗಿ.
- ಮೆನು ಪೇಜ್ನಲ್ಲಿ ಇ-ಸೇವೆಗಳ ಮೇಲೆ ಕ್ಲಿಕ್ ಮಾಡಿ.
- ಅದಾದ ಬಳಿಕ ತಿದ್ದುಪಡಿ/ ಹೊಸ ಸೇರ್ಪಡೆಗೆ ವಿನಂತಿ ಬಟನ್ ಕ್ಲಿಕ್ ಮಾಡಿ. ಈಗ ಹೊಸ ಪೇಜ್ ತೆರೆಯುತ್ತದೆ.
- ನಿಮ್ಮ ಜಿಲ್ಲೆಗೆ ಅನುಗುಣವಾಗಿ ಕಾಣಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಹೊಸ ಸೇರ್ಪಡೆ/ ತಿದ್ದುಪಡಿ ಫಾರ್ಮ್ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ.
- ತಿದ್ದುಪಡಿಗೆ ಬೇಕಾದ ಅಗತ್ಯ ದಾಖಲೆಗಳ ಸ್ಕ್ಯಾನ್ ಪ್ರತಿಯನ್ನು ಅಪಲೋಡ್ ಮಾಡಿ.
- ಅಪ್ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್ಮಿಟ್ ಮಾಡಿರಿ.
- ಅರ್ಜಿ ಸಲ್ಲಿಕೆಯ ರಿಜಿಸ್ಟರ್ ನಂಬರ್ ಸಿಗಲಿದೆ.
- ಈ ನಂಬರ್ ಮೂಲಕ ನಿಮ್ಮ ಅರ್ಜಿಯ ಸ್ಟೇಟಸ್ ಅನ್ನು ಟ್ರ್ಯಾಕ್ ಮಾಡಲು ಸಾಧ್ಯವಾಗಲಿದೆ.
ಇತರೆ ವಿಷಯಗಳು:
ಇಂದು ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರೀ ಮಳೆ! ಹವಮಾನ ವರದಿ
ರೈಲ್ವೆ ಇಲಾಖೆಯಲ್ಲಿದೆ 1,202 ಕ್ಕೂ ಹೆಚ್ಚು ಖಾಲಿ ಹುದ್ದೆ! SSLC ಪಾಸ್ ಆಗಿದ್ರೆ ಸಾಕು
ಗೃಹಲಕ್ಷ್ಮೀ ಬಿಗ್ ಅಪ್ಡೇಟ್: ಹಣ ಬಾರದಿದ್ರೆ ಹೀಗೆ ಮಾಡಿ