ಹಲೋ ಸ್ನೇಹಿತರೇ, ಕೊನೆಗೂ ಇಷ್ಟು ದಿನಗಳವರೆಗೆ ಕಾದು ಕುಳಿತಿದ್ದ ಜನರಿಗೆ ರಾಜ್ಯ ಸರ್ಕಾರದ ಆಹಾರ ಇಲಾಖೆ ಪ್ರಮುಖ ಸುದ್ದಿಯನ್ನು ನೀಡಿದೆ. ಏಪ್ರಿಲ್ ತಿಂಗಳ ಲಿಸ್ಟ್ ಬಿಡುಗಡೆ ಮಾಡುವುದರ ಮೂಲಕ ಯಾರು ಫಲಾನುಭವಿಗಳು ಎಂಬುದನ್ನು ಬಹಿರಂಗಪಡಿಸಿದೆ. ಹೊಸ ರೇಷನ್ ಕಾರ್ಡ್ ಫಲಾನುಭವಿಗಳ ಏಪ್ರಿಲ್ ತಿಂಗಳ ಲಿಸ್ಟ್ ಬಿಡುಗಡೆ ಮಾಡಿದ್ದು, ಇದರ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಕೊನೆವರೆಗೂ ಓದಿ
Contents
ಏಪ್ರಿಲ್ ತಿಂಗಳ ಪಡಿತರ ಪಟ್ಟಿ ಬಿಡುಗಡೆ:
ಈಗಾಗಲೇ ಅಕ್ರಮವಾಗಿ ಪಡಿತರ ಚೀಟಿ ಪಡೆದುಕೊಂಡಿರುವವರ ಪಡಿತರ ಕಾರ್ಡ್ ರದ್ದುಪಡಿ ಮಾಡಲಾಗಿದೆ. ಇದರ ಜೊತೆಗೆ ಕಳೆದ ಎರಡು ವರ್ಷಗಳಿಂದ ಸಲ್ಲಿಕೆ ಆಗಿರುವ ರೇಷನ್ ಕಾರ್ಡ್ ಅರ್ಜಿಯನ್ನು ಪರಿಶೀಲಿಸಿ ಫಲಾನುಭವಿಗಳಿಗೆ ಏಪ್ರಿಲ್ ಒಂದರಿಂದ ಹೊಸ ಪಡಿತರ ಚೀಟಿ ಕೊಡುವ ಬಗ್ಗೆ ರಾಜ್ಯ ಸರ್ಕಾರ ಭರವಸೆ ನೀಡಿತ್ತು. ಇದರ ಆಧಾರದ ಮೇಲೆ ಈಗ ಹೊಸ ಪಡಿತರ ಚೀಟಿ ವಿತರಣೆ ಕಾರ್ಯ ಆರಂಭವಾಗಿದೆ.
ತಿದ್ದುಪಡಿಗೆ ಅವಕಾಶ:
ರೇಷನ್ ಕಾರ್ಡ್ ತಿದ್ದುಪಡಿಗೂ ಕೂಡ ರಾಜ್ಯ ಸರ್ಕಾರ ಅವಕಾಶ ಮಾಡಿಕೊಡುತ್ತದೆ. ಹಾಗಾಗಿ ನೀವು ನಿಮ್ಮ ರೇಷನ್ ಕಾರ್ಡ್ ನಲ್ಲಿ ಯಾವುದೇ ಹೆಸರು, ವಿಳಾಸ, ವಯಸ್ಸು ಮೊದಲಾದ ವಿವರಗಳನ್ನು ಬದಲಾವಣೆ ಮಾಡಿಕೊಳ್ಳುವುದಿದ್ದರೆ ಮಾಡಬಹುದು. ಇದಕ್ಕಾಗಿ ನೀವು ಹತ್ತಿರದ ಸೇವಾ ಕೇಂದ್ರಕ್ಕೆ ಹೋಗಿ ಆನ್ಲೈನ್ ಮೂಲಕ ತಿದ್ದುಪಡಿ ಮಾಡಬಹುದಾಗಿದೆ.
ಇದನ್ನೂ ಸಹ ಓದಿ : ಈ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಬದಲಾವಣೆ! ಹೊಸ ದರ ಇಲ್ಲಿಂದ ತಿಳಿಯಿರಿ
ಹೊಸ ಅರ್ಜಿ ಸಲ್ಲಿಕೆಗೆ ಅವಕಾಶ:
ಇನ್ನು ಕಳೆದ ಎರಡುವರೆ ವರ್ಷಗಳಿಂದ ವಿಲೇವಾರಿ ಆಗದೆ ಹಾಗೆ ಉಳಿದುಕೊಂಡಿದ್ದ 2.95 ಲಕ್ಷ ಪಡಿತರ ಚೀಟಿ ಅರ್ಜಿ ಪರಿಶೀಲನೆ ನಡೆಸಲಾಗಿದ್ದು ಅವುಗಳ ವಿತರಣೆಗೆ ಸರ್ಕಾರ ಮುಂದಾಗಿದೆ. ಆದರೆ ಸದ್ಯಕ್ಕೆ ವೈದ್ಯಕೀಯ ತುರ್ತು ಪರಿಸ್ಥಿತಿಗಾಗಿ ಅರ್ಜಿ ಸಲ್ಲಿಸುವವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಇದನ್ನು ಹೊರತುಪಡಿಸಿ ಸಾಮಾನ್ಯರಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ.
ಸರ್ವರ್ ಸಮಸ್ಯೆ ಶುರುವಾಗಿದೆ:
ಏಪ್ರಿಲ್ ಒಂದರಿಂದಲೇ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವುದು ಮತ್ತೆ ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡುವುದು ಈ ಎರಡು ಕೆಲಸಕ್ಕೂ ಸರ್ಕಾರ ಅವಕಾಶ ಮಾಡಿಕೊಟ್ಟಿದೆ.
ಆದರೆ ದಿನದಲ್ಲಿ ಅರ್ಧ ಗಂಟೆಯಿಂದ ಒಂದು ಗಂಟೆ ಮಾತ್ರ ಆನ್ಲೈನ್ ಪೋರ್ಟಲ್ ತೆರೆದುಕೊಳ್ಳುತ್ತಿದ್ದು ಅಷ್ಟರಲ್ಲಿ ಕೇವಲ ಒಂದರಿಂದ ಐದು ಜನರು ಮಾತ್ರ ತಮ್ಮ ಪಡಿತರ ಚೀಟಿ ಕೆಲಸ ಮಾಡಿಕೊಳ್ಳಲು ಸಾಧ್ಯ.
ಹೀಗಾಗಿ ಸದ್ಯದಲ್ಲಿಯೇ ಸರ್ಕಾರ ಈ ಸಮಸ್ಯೆಯನ್ನು ಪರಿಹರಿಸಿ ದಿನವಿಡಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿ ಕೊಟ್ಟರೆ ಮಾತ್ರ ಅಗತ್ಯ ಇರುವವರಿಗೆ ಪಡಿತರ ಚೀಟಿ ದೊರೆಯುತ್ತದೆ ಎನ್ನಬಹುದು.
ಇನ್ನು ನೀವು ಈಗಾಗಲೇ ಅರ್ಜಿ ಸಲ್ಲಿಸಿದ್ದು ಇದರ ಬಗ್ಗೆ ಮಾಹಿತಿ ಪಡೆದುಕೊಳ್ಳಲು, ನಿಮ್ಮ ಹೆಸರು ಫಲಾನುಭವಿಗಳ ಲಿಸ್ಟ್ ನಲ್ಲಿ ಇದೆಯಾ ಎನ್ನುವುದನ್ನು ತಿಳಿದುಕೊಳ್ಳಲು ತಶೀಲ್ದಾರರ ಕಚೇರಿ ಅಥವಾ ಹತ್ತಿರದ ಆಹಾರ ಇಲಾಖೆಗೆ ಭೇಟಿ ನೀಡಿ ನಿಮ್ಮ ಹೆಸರು ಪರಿಶೀಲಿಸಿಕೊಳ್ಳಬಹುದು.
ಇತರೆ ವಿಷಯಗಳು:
ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಟೂಲ್ಕಿಟ್! ಅರ್ಜಿ ಸಲ್ಲಿಸುವುದು ಹೇಗೆ?
ಈ ಬ್ಯಾಂಕುಗಳಲ್ಲಿ ಸಾಲ ಮಾಡಿದ ರೈತರ ಸಂಪೂರ್ಣ ಸಾಲ ಮನ್ನಾ! ಹೊಸ ಪಟ್ಟಿ ಬಿಡುಗಡೆ
ಚಿನ್ನ ಕೊಳ್ಳೋರಿಗೆ ಬಿಸಿ ತುಪ್ಪ! ದಿನದಿಂದ ದಿನಕ್ಕೆ ಚಿನ್ನದ ಬೆಲೆ ಏರಿಕೆ