ಹಲೋ ಸ್ನೇಹಿತರೆ, ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆಯಡಿ ಎಲ್ಲ ರೈತರು 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭತ್ತ ಬೆಳೆಯುವ ಜಿಲ್ಲೆಯ ರೈತರು ಹೆಸರು ನೋಂದಾಯಿಸಿಕೊಳ್ಳುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ವಿಮಾ ಕಂತು ಒಂದು ಎಕರೆಗೆ 516 ರೂ. ಇರುತ್ತದೆ ಹಾಗೂ ಒಟ್ಟು ವಿಮಾ ಮೊತ್ತ ಎಕರೆಗೆ ₹25,800 ಆಗಿರುತ್ತದೆ. ನೋಂದಣಿಗೆ ಆಗಸ್ಟ್ 16 ಕೊನೆಯ ದಿನವಾಗಿ ನಿಗಡಿಪಡಿಸಿದೆ. ಈ ಯೋಜನೆಯಡಿ ವಿಮಾ ಮೊತ್ತವನ್ನು ಪ್ರತೀ ಹೆಕ್ಟೇರ್ಗೆ 63,750 ರೂ.ಗಳಂತೆ ವಿಮಾ ಕಂತಿನ ದರವನ್ನು ಪ್ರತೀ ಹೆಕ್ಟೇರ್ಗೆ 1,275 ರೂ.ಗಳ ಹಾಗೇ ನಿಗದಿಪಡಿಸಲಾಗಿದೆ.
ಬೆಳೆ ಸಾಲ ಪಡೆಯದ ರೈತರು ತಮ್ಮ ಪಹಣಿ ಪತ್ರ, ಖಾತೆ ಪಾಸ್ ಪುಸ್ತಕ ಅಥವಾ ಬ್ಯಾಂಕ್ ಪಾಸ್ ಪುಸ್ತಕ, ಆಧಾರ್ ಸಂಖ್ಯೆ ಮತ್ತು ಕಂದಾಯ ರಸೀದಿ ಗಳನ್ನು ನೀಡಿ ವಾಣಿಜ್ಯ ಬ್ಯಾಂಕ್ಗಳು ಅಥವಾ ಗ್ರಾಮೀಣ ಮಟ್ಟದ ವ್ಯವಸಾಯ ಸೇವಾ ಸಹಕಾರ ಸಂಘಗಳಲ್ಲಿ, ಗ್ರಾಮ ಒನ್ ಮತ್ತು ವಿಮಾ ಸಂಸ್ಥೆ, ಸಾರ್ವಜನಿಕ ಸೇವಾ ಕೇಂದ್ರ ಗಳಲ್ಲಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬಹುದು.
ಪ್ರಯೋಜನಗಳು
ಹೆಚ್ಚಿನ ಮಳೆ, ಪ್ರವಾಹದಿಂದ ಬೆಳೆ ಮುಳುಗಡೆ, ದೀರ್ಘಕಾಲ ತೇವಾಂಶ ಕೊರತೆ, ತೀವ್ರ ಬರಗಾಲ ಇಂತಹ ಹವಾಮಾನ ವೈಪರೀತ್ಯಗಳಿಂದ ಬಿತ್ತನೆಯಾದ ಕಟಾವಿನ 15 ದಿನ ಪೂರ್ವದವರೆಗಿನ ಬೆಳೆ ನಷ್ಟವಾಗಿ ಸಾಮಾನ್ಯ ಇಳುವರಿಯ %50ಕ್ಕಿಂತ ಕಡಿಮೆ ಇದ್ದಲ್ಲಿ ಅಥವಾ ಬೆಳೆ ನಷ್ಟವಾದಲ್ಲಿ ವಿಮೆ ಮಾಡಿದ ರೈತರಿಗೆ ಬೆಳೆ ನಷ್ಟ ಪರಿಹಾರದಲ್ಲಿ ಶೇ. 25ರಷ್ಟು ಹಣ ಮುಂಚಿತವಾಗಿ ಸಿಗಲಿದೆ. ಬೆಳೆ ಕಟಾವಿನ ವಾಸ್ತವದ ಇಳುವರಿ ಆಧಾರದ ಮೇಲೆ ಅಂತಿಮ ಬೆಳೆ ನಷ್ಟ ಪರಿಹಾರದಲ್ಲಿ ಹೊಂದಾಣಿಕೆ ಮಾಡಿ ನೀಡಲಾಗುವುದು.
ಇದನ್ನು ಓದಿ: ನೌಕರರಿಗೆ ಸಿಹಿ ಸುದ್ದಿ: ಜುಲೈ 1 ರಿಂದ ವೇತನ ಪರಿಷ್ಕರಣೆ ಜಾರಿ!
ನಿರ್ದಿಷ್ಟ ಸ್ಥಳದಲ್ಲಿ ಭೂಕುಸಿತ, ಬೆಳೆ ಮುಳುಗಡೆ, ಮೇಘಸ್ಫೋಟ, ಆಲಿಕಲ್ಲು ಮಳೆ, ಹಾಗೂ ಗುಡುಗು-ಮಿಂಚುಗಳಿಂದ ಉಂಟಾಗುವ ಬೆಂಕಿ ಅವಘಡಗಳಂತಹ ಪ್ರಕೃತಿ ವಿಕೋಪಗಳಾಗಿ ಬೆಳೆ ಹಾನಿಯಾದಲ್ಲಿ ವೈಯಕ್ತಿಕವಾಗಿ ಪರಿಹಾರ ದೊರೆಯಲಿದೆ. ಅಧಿಸೂಚಿಸಿದ ಘಟಕದಲ್ಲಿ ಸೂಚಿಸಿರುವ ಹಾಗೇ ಶೇ. 25ಕ್ಕಿಂತ ಹೆಚ್ಚಿನ ಪ್ರದೇಶದಲ್ಲಿ ಬೆಳೆ ನಷ್ಟವಾದರೆ ವಿಮೆಗೆ ಒಳಪಟ್ಟಂತೆ ಬೆಳೆ ನಷ್ಟದ ವರದಿ ಮಾಡಿದರೆ, ರೈತರಿಗೆ ಮಾದರಿ ಸಮೀಕ್ಷೆಗೆ ಅನುಗುಣವಾಗಿ ಪರಿಹಾರವನ್ನು ನೀಡಲಾಗುವುದು.
ಕಟಾವಿನ ನಂತರದ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ ಹಾಗೂ ಕಟಾವು ಕೈಗೊಳ್ಳುವ 14 ದಿನಗಳ ಒಳಗೆ ಪ್ರಕೃತಿ ವಿಕೋಪಗಳಿಂದ ಬೆಳೆ ನಾಶವಾದಲ್ಲಿ ವೈಯಕ್ತಿಕವಾಗಿ ಪರಿಹಾರ ದೊರೆಯಲಿದೆ. ಮೇಲಿನ ಎರಡೂ ಸಂದರ್ಭಗಳಲ್ಲಿ ರೈತರು ವಿಮಾ ಸಂಸ್ಥೆ ಅಥವಾ ಹಣಕಾಸು ಸಂಸ್ಥೆ ಅಥವಾ ಕೃಷಿ ಇಲಾಖೆಯ ಕಚೇರಿಗಳಿಗೆ 72 ಗಂಟೆಗಳ ಒಳಗೆ ಬೆಳೆ ಹಾನಿ ವಿವರದ ಮಾಹಿತಿ ನೀಡಬೇಕು. ಮಳೆ ಅಭಾವ ಅಥವಾ ಇತರ ಪ್ರತಿಕೂಲ ಹವಾಮಾನ ಪರಿಸ್ಥಿತಿಯಲ್ಲಿ ಅಧಿಸೂಚಿತ ಘಟಕದಲ್ಲಿ ಶೇ. 75ರಷ್ಟು ಬಿತ್ತನೆಯಾಗದಿದ್ದಲ್ಲಿ ವಿಮೆ ಮಾಡಿಸಿದ ರೈತರಿಗೆ ವಿಮಾ ಮೊತ್ತದ ಶೇ. 25ರಷ್ಟು ಪರಿಹಾರ ದೊರೆಯಲಿದೆ.
ಬೆಳೆ ಸಾಲ ಪಡೆದ ರೈತರು ಬೆಳೆ ವಿಮೆಯಲ್ಲಿ ಭಾಗವಹಿಸಲು ಇಷ್ಟವಿಲ್ಲದಿದ್ದರೆ ಬ್ಯಾಂಕಿನ ವ್ಯವಸ್ಥಾಪಕ ರಿಗೆ ಕೊನೆಯ ದಿನಾಂಕದ ಒಂದು ವಾರದ ಮೊದಲು ಇದರ ಸಲುವಾಗಿ ಲಿಖೀತವಾಗಿ ಮುಚ್ಚಳಿಕೆ ಪತ್ರ ನೀಡಿ ಬೆಳೆ ವಿಮೆಯಿಂದ ಕೈಬಿಡಲು ಕೋರಿ ನೀಡಬೇಕು.
ಇತರೆ ವಿಷಯಗಳು:
1500 ಪೊಲೀಸ್ ಹುದ್ದೆಗಳಿಗೆ ನೇರ ನೇಮಕಾತಿ! ತಕ್ಷಣ ಅರ್ಜಿ ಸಲ್ಲಿಸಿ
ರೈತರಿಗೆ ಬಿಗ್ ಅಪ್ಡೇಟ್! ಈ ಕೆಲಸ ಮಾಡದಿದ್ದರೆ ನಿಮ್ಮ ಖಾತೆಗೆ ಬರಲ್ಲ 17ನೇ ಕಂತಿನ ಹಣ