rtgh
Headlines

ಕೃಷಿ ಭಾಗ್ಯ ಯೋಜನೆಯಡಿ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ.! ಅರ್ಹ ರೈತರು ತಕ್ಷಣ ಈ ಸರ್ಕಾರಿ ಕೇಂದ್ರಕ್ಕೆ ಭೇಟಿ ನೀಡಿ

Krishi Bhagya Subsidy Scheme karnataka
Share

ಹಲೋ ಸ್ನೇಹಿತರೇ, ಕೃಷಿ ಭಾಗ್ಯ ಯೋಜನೆಯ ಸಬ್ಸಿಡಿ ಸೌಲಭ್ಯ ಪಡೆದುಕೊಳ್ಳಬೇಕೆ..? ಕರ್ನಾಟಕ ಸರ್ಕಾರ ಕೃಷಿ ಭಾಗ್ಯ ಸಬ್ಸಿಡಿ ಯೋಜನೆಯಡಿಯಲ್ಲಿ ವಿವಿಧ ಕಾರ್ಯಗಳಿಗೆ ಸಬ್ಸಿಡಿ ನೀಡುತ್ತದೆ. ಅರ್ಹ ಫಲಾನುಭವಿಗಳು ಈ ಯೋಜನೆಯ ಸೌಲಭ್ಯ ಪಡೆದುಕೊಳ್ಳಲು ಏನು ಮಾಡಬೇಕು ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ.

Krishi Bhagya Subsidy Scheme karnataka

2023-24 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದ 24 ಜಿಲ್ಲೆಗಳ 106 ತಾಲ್ಲೂಕುಗಳಲ್ಲಿ ಪ್ಯಾಕೇಜ್ ಮಾದರಿಗಳಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಅನುಷ್ಠಾನಗೊಳಿಸಲು ಸರ್ಕಾರವು ಮುಂದಾಗಿದೆ. ಅಂತರ್ಜಲ ವೃದ್ಧಿ & ಮಳೆಯಾಶ್ರಿತ ಕೃಷಿ ಭೂಮಿಯಲ್ಲಿ ಬೇಸಿಗೆಯಲ್ಲಿಯೂ ಕೃಷಿ ಚಟುವಟಿಕೆ ಕೈಗೊಳ್ಳಲು ಈ ಯೋಜನೆ ಅವಕಾಶವನ್ನು ಕಲ್ಪಿಸಿಕೊಡುತ್ತದೆ.

ಕೃಷಿ ಭಾಗ್ಯ ಸಬ್ಸಿಡಿ ಯೋಜನೆ 2024

ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡುವುದು, ಕ್ಷೇತ್ರ ಬದು ನಿರ್ಮಾಣ ಮಾಡುವುದು, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ ನಿರ್ಮಾಣ, ಕೃಷಿ ಹೊಂಡದಿಂದ ನೀರು ಎತ್ತಲು ಪಂಪ್ ಸೆಟ್‌ಗಳನ್ನು ಖರೀದಿಸಲು ಅವಕಾಶ, ನೀರನ್ನು ಬೆಳೆಗೆ ಹಾಯಿಸಲು ತುಂತುರು ನೀಡು, ಹನಿ ನೀರಾವರಿ ಘಟಕ ಅನುಷ್ಠಾನಕ್ಕೆ ಸಬ್ಸಿಡಿ ನೀಡಲಾಗುವುದು.

ಕೃಷಿ ಭಾಗ್ಯ ಪ್ಯಾಕೇಜ್‌ ಈ ಕೆಳಕಂಡ ಘಟಕಗಳನ್ನು ಒಳಗೊಂಡಿದ್ದು, ಯೋಜನೆಯ ಸಮಗ್ರ ಸದುಪಯೋಗ ಪಡೆಯಲು ರೈತ ಬಾಂಧವರಲ್ಲಿ ವಿನಂತಿ ಎಂದು ಸರ್ಕಾರದಿಂದ ತಿಳಿಸಿದೆ.

  1. ಕ್ಷೇತ್ರ ಬದು ನಿರ್ಮಾಣ.
  2. ಕೃಷಿ ಹೊಂಡ ನಿರ್ಮಾಣ.
  3. ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ.
  4. ಕೃಷಿ ಹೊಂಡದಿಂದ ನೀರು ಎತ್ತಲು ಪಂಪ್ ಸೆಟ್.
  5. ನೀರನ್ನು ಬೆಳೆಗೆ ಹಾಯಿಸಲು ಸೂಕ್ಷ್ಮ (ತುಂತುರು/ಹನಿ) ನೀರಾವರಿ.

ದಾಖಲೆಗಳು:

  • ರೈತರ ಅರ್ಜಿ
  • ರೈತರ ಭಾವಚಿತ್ರ.
  • FID (FID ಇಲ್ಲವಾದಲ್ಲಿ ಆಧಾ‌ರ್ ಕಾರ್ಡ್, ಪಹಣಿ ಪ್ರತಿ, ಜಾತಿ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಬುಕ್)

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ರೈತರು ತಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಸ್ವೀಕೃತವಾದ ಅರ್ಹ ಅರ್ಜಿಗಳ ಜೇಷ್ಠತೆಯನ್ವಯ ಮತ್ತು ಹೋಬಳಿಗೆ ನಿಗದಿಪಡಿಸಿದ ಗುರಿಗಳ ಅನ್ವಯ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲಾಗುತ್ತದೆ ಎಂದು ಕೃಷಿ ಇಲಾಖೆಯು ತಿಳಿಸಿದೆ.

ಇತರೆ ವಿಷಯಗಳು

ಕಾವೇರಿ 2 ಸಾಫ್ಟ್‌ವೇರ್ ಬಳಸಿ ಆನ್‌ಲೈನ್‌ ನಲ್ಲಿ ವಿವಾಹ ನೋಂದಾಯಿಸಿ

KEA ಹುದ್ದೆಗಳಿಗೆ ಅರ್ಜಿ ಆಹ್ವಾನ.! 97,100 ರೂ. ವೇತನ ಪಡೆಯಲು ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಿ


Share

Leave a Reply

Your email address will not be published. Required fields are marked *