ಅಡಿಕೆ ಬೆಳೆಯುವ ರೈತರಿಗೆ ಗುಡ್ ನ್ಯೂಸ್! ಜಿಎಸ್ಟಿ ಹೊರೆ ಇಳಿಕೆ?
ಹಲೋ ಸ್ನೇಹಿತರೆ, ಅಡಿಕೆ ಮಾರುಕಟ್ಟೆಯ ಬೆಳವಣಿಗೆಗೆ ಉತ್ತೇಜನ ನೀಡಲು ಮತ್ತು ರೈತರ ಹಲವು ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕ್ಯಾಂಪ್ಕೊ ಕಂಪನಿಯು ಮನವಿ ಮಾಡಿದೆ. ಮುಖ್ಯವಾಗಿ ಅಡಿಕೆಯ ಮೇಲಿನ ಜಿಎಸ್ಟಿಯನ್ನು ಶೇ. 5ರಿಂದ ಶೇ.2ಕ್ಕೆ ಇಳಿಸಬೇಕು ಕೋರಿಕೆ ಇಟ್ಟಿದೆ. ಇದರಿಂದ ರೈತರು ಸಹಕಾರಿ ಸಂಸ್ಥೆಗಳಲ್ಲಿ ಹೆಚ್ಚು ವ್ಯವಹರಿಸಲು ಉತ್ತೇಜನ ಸಿಗಲಿದೆ. ತೆರಿಗೆಯ ಕಳ್ಳತನಕ್ಕೆ ಕಡಿವಾಣ ಬೀಳಲಿದ್ದು ಸರಕಾರಕ್ಕೆ ಈ ತೆರಿಗೆಯಿಂದ ಆದಾಯ ಹೆಚ್ಚಾಗಲಿದೆ. ಸಿಜಿಎಸ್ಟಿ, ಎಸ್ಜಿಎಸ್ಟಿ ಮತ್ತು ಐಜಿಎಸ್ಟಿ ಮುಂತಾದ…