ಹಲೋ ಸ್ನೇಹಿತರೇ, ದೇಶದಲ್ಲಿ ಮುಂಗಾರು ವಾಡಿಕೆಗಿಂತ ಶೇ.20ರಷ್ಟು ಕಡಿಮೆಯಾಗಿದ್ದು, ದೇಶದ ಕೃಷಿ ವಲಯದ ಮೇಲೆ ಪರಿಣಾಮ ಬೀಳುವ ಆತಂಕ ಸೃಷ್ಟಿಸಿದೆ. ಮಳೆಯ ಬಗ್ಗೆ ಎಲ್ಲೆಲ್ಲಿ ಎಷ್ಟೆಷ್ಟು ಸುರಿಯಲಿದೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ
ಹವಾಮಾನ ಇಲಾಖೆ ಹೇಳುವ ಪ್ರಕಾರ, ಜೂನ್ 1 ರಿಂದ ಭಾರತದಲ್ಲಿ ಸಾಮಾನ್ಯಕ್ಕಿಂತ ಶೇ.20 ಕಡಿಮೆ ಮಳೆಯಾಗಿದೆ. ದಕ್ಷಿಣದ ಕೆಲವು ರಾಜ್ಯಗಳನ್ನು ಹೊರತುಪಡಿಸಿ ಬಹುತೇಕ ಎಲ್ಲಾ ಪ್ರದೇಶಗಳಲ್ಲೂ ಮಳೆ ಕೊರತೆಯಾಗಿದೆ. ವಾಯುವ್ಯ ರಾಜ್ಯಗಳು ಬಿಸಿಲಿನ ಬೇಗೆಯಲ್ಲಿ ಬೇಯುತ್ತಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
Contents
ದಕ್ಷಿಣದಲ್ಲಿ ಶೇ.17ರಷ್ಟು ಹೆಚ್ಚು ಮಳೆ:
ಸೋಯಾಬೀನ್, ಹತ್ತಿ, ಕಬ್ಬು & ದ್ವಿದಳ ಧಾನ್ಯಗಳನ್ನು ಬೆಳೆಯುವ ಮಧ್ಯ ಭಾರತದಲ್ಲಿ ಮಳೆ ಕೊರತೆಯು ಶೇ.29ಕ್ಕೇರಿದೆ. ಆದರೆ, ಭತ್ತ ಬೆಳೆಯುವ ದಕ್ಷಿಣ ಪ್ರದೇಶದಲ್ಲಿ ಮಾನ್ಸೂನ್ ನಿರೀಕ್ಷೆಗಿಂತಲೂ ಮೊದಲು ಪ್ರಾರಂಭವಾದ ಕಾರಣ ಸಾಮಾನ್ಯಕ್ಕಿಂತ ಶೇ.17ರಷ್ಟು ಹೆಚ್ಚು ಮಳೆಯಾಗಿದೆ. ಈಶಾನ್ಯದಲ್ಲಿ ಇದುವರೆಗೆ ವಾಡಿಕೆಗಿಂತ ಶೇ.20ರಷ್ಟು ಕಡಿಮೆ ಮಳೆಯಾಗಿದೆ & ವಾಯುವ್ಯದಲ್ಲಿ ಶೇ.68ರಷ್ಟು ಕಡಿಮೆಯಾಗಿದೆ.
ಕರಾವಳಿ ಜಿಲ್ಲೆಗಳಿಗೆ ಯೆಲ್ಲೊಅಲರ್ಟ್
ರಾಜ್ಯದ ಕರಾವಳಿಯಲ್ಲಿ ಮಂಗಳವಾರ ವ್ಯಾಪಕ ಮಳೆಯಾಗಲಿದ್ದು, ಹವಾಮಾನ ಇಲಾಖೆ ದಕ್ಷಿಣ ಕನ್ನಡ, ಉಡುಪಿ & ಉತ್ತರ ಕನ್ನಡ ಜಿಲ್ಲೆಗೆ ಯೆಲ್ಲೊ ಅಲರ್ಟ್ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಜೂ.18 ರಿಂದ 23 ರವರೆಗೂ ವ್ಯಾಪಕ ಮಳೆಯಾಗಲಿದೆ. ಉಳಿದಂತೆ ಉತ್ತರ & ದಕ್ಷಿಣ ಒಳನಾಡಿನಲ್ಲಿ ಜೂ.18 & 19 ರಂದು ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇತರೆ ವಿಷಯಗಳು
New criminal laws: ಜುಲೈ 1 ರಿಂದ ದೇಶದಲ್ಲಿ ಹೊಸ ಕ್ರಿಮಿನಲ್ ಕಾನೂನು ಜಾರಿ!
ಇಂದು ದೇಶದ 9.26 ಕೋಟಿ ರೈತರಿಗೆ ಬಂಪರ್! ಪಿಎಂ ಕಿಸಾನ್ 17ನೇ ಕಂತಿನ ಹಣ ಬಿಡುಗಡೆ